ದಕ್ಷಿಣ ಕನ್ನಡ

ಬೆಳ್ತಂಗಡಿ: ‘ಬೆಸ್ಟ್ ಎಂಎಲ್‌ಎ’ ಹರೀಶ್ ಪೂಂಜಗೆ ಕನ್ಯಾಡಿ ಶ್ರೀಗಳಿಂದ ಆಶೀರ್ವಾದ, ಭವ್ಯ ಸನ್ಮಾನ!

 


ಬೆಳ್ತಂಗಡಿ:ಉತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿರುವ ಬೆಳ್ತಂಗಡಿ ಕ್ಷೇತ್ರದ ಜನಪ್ರಿಯ ಶಾಸಕ ಹರೀಶ್ ಪೂಂಜ ಅವರಿಗೆ ಶ್ರೀ ಕ್ಷೇತ್ರ ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಗೌರವ ಸನ್ಮಾನ ನೆರವೇರಿತು.

​ಕ್ಷೇತ್ರದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶಾಸಕರಿಗೆ ಶಾಲ ಹೊದಿಸಿ, ಫಲ-ಪುಷ್ಪ ನೀಡಿ ಆಶೀರ್ವದಿಸಿದರು. 'ಬೆಸ್ಟ್ ಎಂ.ಎಲ್.ಎ' ಗೌರವಕ್ಕೆ ಪಾತ್ರರಾಗುವ ಮೂಲಕ ಕ್ಷೇತ್ರದ ಹಿರಿಮೆ ಹೆಚ್ಚಿಸಿದ ಹರೀಶ್ ಪೂಂಜ ಅವರ ಜನಪರ ಕೆಲಸಗಳನ್ನು ಈ ವೇಳೆ ಸ್ವಾಮೀಜಿಯವರು ಶ್ಲಾಘಿಸಿದರು.

​ಈ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವು ಪ್ರಮುಖ ನಾಯಕರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.



image