ಧರ್ಮಸ್ಥಳ: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ, ಅವರಿಂದ ಆಶೀರ್ವಾದ ಪಡೆದರು.
ಸಚಿವರ ಭೇಟಿಗೆ ಅತ್ಯಂತ ಪ್ರೀತಿಯಿಂದ ಸ್ಪಂದಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಯು.ಟಿ. ಖಾದರ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಜೊತೆಗೆ ಅವರ ಜನಪರ ಕಾರ್ಯಗಳಿಗೆ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಇದಕ್ಕೂ ಮುನ್ನ, ಸಚಿವರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಹೆಗ್ಗಡೆಯವರ ಸಹೋದರರಾದ ಡಿ. ಹರ್ಷೇಂದ್ರ ಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರಿಗೆ ಮಾಲಾರ್ಪಣೆ ಮಾಡುವ ಮೂಲಕ ಧರ್ಮಸ್ಥಳದ ಪರವಾಗಿ ಭವ್ಯ ಸ್ವಾಗತ ಕೋರಲಾಯಿತು.
