ಧರ್ಮಸ್ಥಳ:ಕನ್ನಡ ಚಿತ್ರರಂಗದ ಜನಪ್ರಿಯ ನಟ, 'ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಕ್ಷೇತ್ರಕ್ಕೆ ಆಗಮಿಸಿದ ನಟ ಪ್ರಜ್ವಲ್, ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತದನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಕೆಲಕಾಲ ಮಾತುಕತೆ ನಡೆಸಿ ಅವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.
