ರಾಜ್ಯ

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಮಿಂಚಿನ ದಾಳಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಸ್ಮಾರ್ಟ್‌ಫೋನ್ ಜಪ್ತಿ!

 


ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲಿನ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಅಧಿಕಾರಿಗಳ ಮಿಂಚಿನ ದಾಳಿ ವೇಳೆ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆಯ ಲೋಪವನ್ನು ಮತ್ತೊಮ್ಮೆ ಬಯಲಿಗೆಳೆದಿದೆ.

​ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ ಹಾಗೂ ಡಿಸಿಪಿಗಳಾದ ಶ್ರೀಹರಿಬಾಬು ಮತ್ತು ರಾಜಾ ಇಮಾಮ್ ಕಾಸಿಂ ಅವರ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದ ತಂಡವು ಮಂಗಳವಾರ ಇಡೀ ದಿನ ಕಾರಾಗೃಹ ಸಂಕೀರ್ಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ಅವರಿದ್ದ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್ ಮೊಬೈಲ್ ಫೋನ್ ಜಪ್ತಿಯಾಗಿದೆ.

ತನಿಖೆಗೆ ಇಲಾಖೆ ಮುಂದು:

ಅತಿ ಹೆಚ್ಚು ಭದ್ರತೆ ಇರುವ ಬ್ಯಾರಕ್‌ಗೆ ಮೊಬೈಲ್ ಫೋನ್ ತಲುಪಿದ್ದು ಹೇಗೆ? ಇದರ ಹಿಂದೆ ಯಾರ ಹಸ್ತಕ್ಷೇಪವಿದೆ ಹಾಗೂ ಎಷ್ಟು ದಿನಗಳಿಂದ ಇದನ್ನು ಬಳಸಲಾಗುತ್ತಿತ್ತು ಎಂಬ ಕುರಿತು ಸಿಸಿಬಿ ತನಿಖೆ ಚುರುಕುಗೊಳಿಸಿದೆ. ಈ ಸಂಬಂಧ ನಿಯಮಗಳ ಉಲ್ಲಂಘನೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

​ಇದೇ ದಾಳಿಯ ಸಮಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಬ್ಯಾರಕ್‌ಗಳನ್ನೂ ಸಿಸಿಬಿ ಪರಿಶೀಲಿಸಿತಾದರೂ, ಅಲ್ಲಿ ಯಾವುದೇ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. high-profile ಕೈದಿಯ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕಿರುವುದು ಜೈಲು ಸಿಬ್ಬಂದಿಗೆ ಬಿಗ್ ಶಾಕ್ ನೀಡಿದೆ.



image