ದೇಶ

ಚೆನ್ನೈ : ನಟಿ ತ್ರಿಷಾ ವಿರುದ್ಧ ದ್ವಂದ್ವಾರ್ಥದ ಹೇಳಿಕೆ ಆರೋಪ: ತಮಿಳುನಾಡಿನಲ್ಲಿ ಉದಯನಿಧಿ ಸ್ಟಾಲಿನ್ ಬಂಧನ?

 


ಚೆನ್ನೈ: ಪ್ರಸಿದ್ಧ ದಕ್ಷಿಣ ಭಾರತದ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಬಹಿರಂಗ ವೇದಿಕೆಯಲ್ಲಿ ಅಸಭ್ಯ ಹಾಗೂ ದ್ವಂದ್ವಾರ್ಥ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಹಿನ್ನೆಲೆ ಏನು?

​ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿದಾಯುತ್ತಿದ್ದಾಗ, ನೆರೆದಿದ್ದ ಜನಸ್ತೋಮದಿಂದ 'ತ್ರಿಷಾ... ತ್ರಿಷಾ...' ಎಂದು ಕೆಲವರು ಘೋಷಣೆ ಕೂಗಿದ್ದರು.

​ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಉದಯನಿಧಿ, ನಗುತ್ತಲೇ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ, "ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಮಾತ್ರ ಬರಲೇಬೇಕು" ಎಂಬ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ರಾಜಕೀಯ ರಂಗದಲ್ಲಿ ತೀವ್ರ ಆಕ್ರೋಶ

​ಉದಯನಿಧಿ ಅವರ ಈ ಮಾತುಗಳು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡು, ಮಹಿಳಾ ರತ್ನಕ್ಕೆ ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ಕೊಡುವಂತಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

​ಈ ಹೇಳಿಕೆಯನ್ನು ಖಂಡಿಸಿರುವ 'ತಮಿಳಗ ವೆಟ್ರಿ ಕಳಗಂ' (TVK) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಮಹಿಳಾ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಅಲ್ಲದೆ, TVK ಪಕ್ಷವು ಈ ಕುರಿತು ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಹ ದಾಖಲಿಸಿತ್ತು. ದೂರು ಬೆನ್ನಲ್ಲೇ ಪೊಲೀಸರು ಉದಯನಿಧಿ ಅವರನ್ನು ಅವರ ನಿವಾಸದಲ್ಲೇ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.









image